ಅಣಬೆ ಬೇಸಾಯ ಉಚಿತ ತರಬೇತಿ – ಆಸಕ್ತರಿಂದ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಯುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಜೂನ್ 17ರಿಂದ ಆರಂಭಿಸಲಾಗುತ್ತದೆ. ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಗಳಿಗೆ ಈ ಯೋಜನೆಯಿಂದ ಸದುಪಯೋಗ ಪಡೆಯುವ ಅವಕಾಶವಿದೆ.
ಆಸಕ್ತರು 18 ರಿಂದ 45 ವರ್ಷದೊಳಗಿನವರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿದ್ದು, ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.
ಈ ಉಚಿತ ತರಬೇತಿಯಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಉಚಿತವಾಗಿ ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಳಿಸಿದ ನಂತರ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಮಾನ್ಯತೆಯುಳ್ಳ ಪ್ರಮಾಣಪತ್ರ ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ಇಚ್ಛಿಸುವವರು ಜೂನ್ 12ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ಸಲ್ಲಿಸಲು ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಂಪರ್ಕಿಸಿ.
ಮಾಹಿತಿಗಾಗಿ ಸಂಪರ್ಕಿಸಿ:
ಮೊಬೈಲ್ ಸಂಖ್ಯೆ: 9740982585, 9241482541, 9113880324
ಈ ಉಚಿತ ತರಬೇತಿಯನ್ನು ಪಡೆದು ಅಣಬೆ ಕೃಷಿಯಲ್ಲಿ ನಿಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಿ!